Sunday, 28 August 2016

ಕರಿಬೇವನ್ನು ಆಹಾರದಿಂದ ತೆಗೆದು ಎಸೆಯುವ ಮುನ್ನ ಯೋಚಿಸಿ

ಇನ್ನು ಕರಿಬೇವನ್ನು ಆಹಾರದಿಂದ ತೆಗೆದು ಎಸೆಯುವ ಮುನ್ನ ಯೋಚಿಸಿ


ಕರಿಬೇವು ಒಗ್ಗರಣೆಗೆ ಬೇಕೆಬೇಕು. ಇಲ್ಲದಿದ್ದರೆ ಸಾಂಬಾರ್ ಅಥವಾ ಯಾವುದೇ ಪದಾರ್ಥಗಳಾಗಲಿ ಅದರ ರುಚಿ ಸಿಗುವುದಿಲ್ಲ. ಒಂದೊಮ್ಮೆ ಕೊತ್ತಂಬರಿ ಸೊಪ್ಪು ಇಲ್ಲದಿದ್ದರೂ, ಕರಿಬೇವು ಮಾತ್ರ ಒಗ್ಗರಣೆಗೆ ಇರಲೇ ಬೇಕು. ಇಂಥ ಕರಿಬೇವು ಆರೋಗ್ಯ ಕಾಪಾಡುವ ಔಷಧವೂ ಆಗಿದೆ. ಕರಿಬೇವು ಅಪ್ಪಟ ಭಾರತದ ಮೂಲದ್ದೆಂದು ಹಲವು ಪುರಾಣಗಳಲ್ಲಿ ಪ್ರಸ್ತಾಪಿಸಲಾಗಿದೆ. ಆ ಕಾಲದಿಂದಲೂ ಕರಿಬೇವು ನಮ್ಮ ಪೂರ್ವಜರ ಅಡುಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.


ಆರೋಗ್ಯ ಕಾಯಲು ಸಹ ಕರಿಬೇವು ಅತ್ಯಗತ್ಯ. ಇದನ್ನು ದೇಹದಲ್ಲಿರುವ ಟಾಕ್ಸಿಕ್ ಅಂಶಗಳನ್ನು ಹೊರ ಹಾಕಲು ಬಳಸಲಾಗುತ್ತದೆ. ಜತೆಗೆ ಇದು ದೇಹದಲ್ಲಿರುವ ಪಿತ್ತವನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಅದಲ್ಲದೆ ವಾಂತಿ ಬರುವಂತಾಗುವಿಕೆ ಮತ್ತು ಅಜೀರ್ಣವನ್ನು ಸಹ ನಿವಾರಿಸುತ್ತದೆ. ಏಕೆಂದರೆ ಪಿತ್ತ ಹೆಚ್ಚಾಗಿದ್ದಲ್ಲಿ ನಾಸಿಯಾ ಮತ್ತು ಅಜೀರ್ಣ ಉಂಟಾಗುತ್ತದೆ. ಇದರಲ್ಲಿ ಅಲ್ಕಾಲಾಯ್ಡ್ ಕಾರ್ಬಾಜೋಲ್ ಇದ್ದು, ಅದು ಉರಿಬಾವು ನಿರೋಧಕ ಗುಣಗಳನ್ನು ಹೊಂದಿರುತ್ತದೆ. ಹೊಟ್ಟೆ ತೊಳೆಸುವಿಕೆಯಂತಹ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ ಎನ್ನುತ್ತಾರೆ ಆರ್ಯುವೇದ ವೈದ್ಯರು.


ಗರ್ಭಿಣಿಯಾಗಿರುವ ಸಮಯದಲ್ಲಿ ಮಹಿಳೆ ತನ್ನ ಹಾಗೂ ಮಗುವಿನ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಈ ಸಂದರ್ಭದಲ್ಲಿ ಪ್ರಯಾಣ ಮಾಡುವಾಗ ಅಥವಾ ಬೆಳಗಿಗ್ಗೆ ಎದ್ದ ತಕ್ಷಣ ವಾಂತಿಯ ಬರುವಂತಹ ಸಮಸ್ಯೆ ಇರುತ್ತದೆ. ಇಂತಹ ಸಮಸ್ಯೆ ಎದುರಿಸುವವರು ಪ್ರತಿ ದಿನ ಕರಿಬೇವಿನ ಎಲೆಗಳನ್ನು ಅರೆದು ತಯಾರಿಸಿದ ಮಿಶ್ರಣವನ್ನು ನೀರಿನಲ್ಲಿ ಸೇರಿಸಿ ಕುಡಿದರೆ ಉತ್ತಮ ಪರಿಣಾಮ ದೊರಕುತ್ತದೆ


ಜೀರ್ಣ ಕ್ರಿಯೆಯನ್ನು ಸುಧಾರಿಸುವ ಸಾಮರ್ಥ್ಯವನ್ನು ಹೊಂದಿದ ಸೊಪ್ಪು ಇದಾಗಿದೆ.  ದೇಹದಲ್ಲಿರುವ ಟಾಕ್ಸಿಕ್ ಅಂಶಗಳನ್ನು ಹೊರ ಹಾಕಲು ಸಹ ಇದನ್ನು ಬಳಸಲಾಗುತ್ತದೆ. ಜೊತೆಗೆ ಇದು ನಿಮ್ಮ ದೇಹದಲ್ಲಿರುವ ಪಿತ್ತವನ್ನು ಕಡಿಮೆ ಮಾಡಲು ಸಹಕರಿಸುತ್ತದೆ.


ಕರಿಬೇವನ್ನು ಸೇವನೆ ಮಾಡುತ್ತಾ ಬಂದರೆ ದೇಹ ಊದಿಕೊಳ್ಳುವುದು ಅಥವಾ ಕೊಲೆಸ್ಟ್ರಾಲ್‌ ಹೆಚ್ಚಾಗುವ ಸಮಸ್ಯೆ ನಿವಾರಣೆಯಾಗಿ, ಫ್ಯಾಟ್‌ ಫ್ರೀ ದೇಹ ನಿಮ್ಮದಾಗುತ್ತದೆ.


ಕರಿಬೇವಿನ ಎಲೆಯಲ್ಲಿ ಐರನ್‌ ಮತ್ತು ಫೋಲಿಕ್‌ ಆಸಿಡ್‌ ಹೆಚ್ಚಿನ ಪ್ರಮಾಣದಲ್ಲಿದೆ. ಇದು ದೇಹಕ್ಕೆ ಬೇಕಾದ ಕಬ್ಬಿಣಾಂಶವನ್ನು ನೀಡಿ ರಕ್ತಹೀನತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ.



ಮಧುಮೇಹಕ್ಕೆ ರಾಮಬಾಣ

 : ಪ್ರತಿದಿನ ಕರಿಬೇವಿನ ಎಲೆಗಳನ್ನು ಆಹಾರದ ಮೂಲಕ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. ಇದರಿಂದ ರಕ್ತದಲ್ಲಿನ ಸಕ್ಕರೆ ಅಂಶ ಗಮನಾರ್ಹ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.  ಕೆಲವೊಮ್ಮೆ ಅಜೀರ್ಣವಾದ ಕಾರಣ ಹಲವು ಅನಿಲಗಳು ಉತ್ಪತ್ತಿಯಾಗಿ ಹೊಟ್ಟೆ ಮತ್ತು ಎದೆಯಲ್ಲಿ ಭಾರಿ ಉರಿ ತರಿಸುತ್ತವೆ. ಇಂತಹ ಸಮಯದಲ್ಲಿ ಕರಿಬೇವನ್ನು ಮಿಕ್ಸಿಯಲ್ಲಿ ಹಾಕಿ ಜ್ಯೂಸ್ ಮಾದರಿಯಲ್ಲಿ ತಯಾರಿಸಿ ಕುಡಿದರೆ ತಕ್ಷಣ ಎದೆಯಲ್ಲಿ ಉರಿ ಕಡಿಮೆಯಾಗುತ್ತದೆ.

ಕಿಡ್ನಿಕಲ್ಲು ತಡೆಯುವ ಕರಿಬೇವು :

 ಪ್ರತಿದಿನ ನಮ್ಮ ಆಹಾರದಲ್ಲಿ ಕರಿಬೇವು ಇರುವಂತೆ ನೋಡಿಕೊಳ್ಳಬೇಕು. ಆ ಮೂಲಕ ಮೂತ್ರಪಿಂಡಗಳಲ್ಲಿ ಕಲ್ಲುಗಳಾಗದಂತೆ ಇದರಿಂದ ತಡೆಯಬಹುದು. ಹೆಚ್ಚಿನ ತೊಂದರೆ  ಕಂಡುಬಂದಲ್ಲಿ ಕರಿಬೇವಿನ ಎಲೆಗಳ ಜ್ಯೂಸ್ ಕುಡಿಯುವ ಮೂಲಕ ಉತ್ತಮ ಪರಿಹಾರ ಸಿಗುತ್ತದೆ.

ಕೂದಲುಗಳ ಬೆಳವಣಿಗೆಗೂ ಉಪಯುಕ್ತ

: ಸಾಮಾನ್ಯವಾಗಿ ಹೆಣ್ಣು ಮಕ್ಕಳು ಉದ್ದನೆಯ ಕೂದಲಿಗಾಗಿ ಇನ್ನಿಲ್ಲದ ಕಸರತ್ತು, ಆನೇಕ ಪ್ರಯೋಗಳನ್ನು ಮಾಡುತ್ತಿರುತ್ತಾರೆ, ನಾನಾ ಬಗೆಯ ಶಾಂಪೂ, ಹಾಗೂ ತೈಲಗಳನ್ನು ಬಳಸುತ್ತಿರುತ್ತಾರೆ. ನಿಮಗೆ ಆಶ್ಚರ್ಯವಾಗುವ ವಿಷಯವೇನೆಂದರೆ ಊಟದಲ್ಲಿ ಹಾಗೂ ನೇರವಾಗಿ ಹೆಚ್ಚು ಕರಿಬೇವು ಸೇವನೆಯಿಂದ ಸದೃಢವಾದ ಮತ್ತು ಉದ್ದನೆಯ ಕೂದಲುಗಳ ಬೆಳವಣಿಗೆಯಾಗುತ್ತವೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

No comments:

Post a Comment