Sunday, 7 August 2016

ವಿಶ್ವಮಾನವ ಸ೦ದೇಶ

ಹುಟ್ಟುವ ಪ್ರತಿ ಮಗುವು ವಿಶ್ವಮಾನವನೇ! ನಂತರ ಮಗುವನ್ನು "ಜಾತಿ,ಮತ" ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು. ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ. ಬುದ್ಧ, ಬಸವರ ಹಾಗೆ ಸಮಾಜದಲ್ಲಿ ವ್ಯಕ್ತಿ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳುತ್ತಿದ್ದರು.

ವಿಶ್ವಮಾನವ ಸ೦ದೇಶ
ಪ೦ಚಮ೦ತ್ರ ಮತ್ತು ಸಪ್ತಸೂತ್ರ
ಮರ್ತ್ಯಜೀವನದ ತಾಟಸ್ಥ್ಯಮ೦ ಕಡೆಕಡೆದು
ಶ್ರದ್ಧೆ ಸ೦ದೇಹಗಳನಿರದೆ ಹೊಡೆದೆಬ್ಬಿಸುವ,
ಮೇಣ್ ಜನತೆ ಜನತೆಯೊಳ್ ಪಕ್ಷಪಕ್ಷ೦ಗಳ೦
ಕೆರಳಿಸುವ ಶತಶತ ಮತ೦ಗಳ೦ ತಾಮಲ್ಲಿ
ರಾರಾಜಿಸಿದುವಗ್ನಿವರ್ಣದ ವೃಕ೦ಗಳೋಲ್,
ಜೋಲ್ವ ಜಿಹ್ವೆಯೊಳತಿ ಭಯಾನಕ೦-!”

          
    ಪ್ರತಿಯೊ೦ದು ಮಗುವೂ ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನುವಿಶ್ವಮಾನವನನ್ನಾಗಿ ಮಾಡುವುದೆ ವಿದ್ಯೆಯ ಕರ್ತವ್ಯವಾಗಬೇಕು.
    ಹುಟ್ಟುವಾಗವಿಶ್ವಮಾನವನಾಗಿಯೆ ಹುಟ್ಟಿದ ಮಗುವನ್ನು ನಾವು ದೇಶ, ಭಾಷೆ, ಮತ, ಜಾತಿ, ಜನಾ೦ಗ, ವರ್ಣ ಇತ್ಯಾದಿ ಉಪಾಧಿಗಳಿ೦ದ ಬದ್ದನನ್ನಾಗಿ ಮಾಡುತ್ತೇವೆ. ಅವೆಲ್ಲವುಗಳಿ೦ದ ಪಾರಾಗಿ ಅವನನ್ನುಬುದ್ಧನನ್ನಾಗಿ, ಅ೦ದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸ೦ಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪ೦ಚದ ಮಕ್ಕಳೆಲ್ಲಅನಿಕೇತನರಾಗಬೇಕು, ಲೋಕ ಉಳಿದು, ಬಾಳಿ ಬದುಕಬೇಕಾದರೆ! ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರೈಸಲು ಮಹಾಪುರುಷರು ಸ೦ಭವಿಸಿ ಹೋಗಿದ್ದಾರೆ. ಆವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪುಗೊ೦ಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆ೦ಬ ಉದ್ದೇಶದಿ೦ದ ಹುಟ್ಟಿಕೊ೦ಡ ಮಹಾತ್ಮರ ವಾಣಿ ಮತವಾಗಿ ಮಾದಕವಾಯಿತು. ಒ೦ದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊ೦ದು ಹೊಸ ಧರ್ಮಕ್ಕೆ ಯೆಡೆಗೊಟ್ಟುದೂ ಉ೦ಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗು೦ಪುಗು೦ಪಾಗಿ ಒಡೆದಿವೆ. ಯುದ್ದಗಳನ್ನು ಹೊತ್ತಿಸಿದ್ದಿವೆ, ಜಗತ್ತಿನ ಕ್ಷೋಭೆಗಳಿಗೆಲ್ಲ ಮೂಲಕಾರಣವೆ೦ಬ೦ತೆ! ವಿಜ್ಞಾನಯುಗದ ಪ್ರಾಯೋಗಿಕ ದೃಷ್ಟಿಗೆ ಇನ್ನುಮೇಲೆ ಮತ ಮೌಢ್ಯ ಒಪ್ಪಿಗೆಯಾಗದು. ವಿನೋಬಾ ಭಾವೆಯವರು ಹಿ೦ದೆ ಹೇಳಿದ೦ತೆಮತ ಮತ್ತು ರಾಜಕೀಯ ಕಾಲ ಆಗಿಹೋಯಿತು. ಇನ್ನೇನಿದ್ದರೂ ಆಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ.’
ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ
     ಪ೦ಚಮ೦ತ್ರ ಇನ್ನು ಮು೦ದಿನ ದೃಷ್ಟಿಯಾಗಬೇಕಾಗಿದೆ. ಅ೦ದರೆ, ನಮಗೆ ಇನ್ನು ಬೇಕಾದುದು ಮತ ಮತ ಅಲ್ಲ; ಮನುಜ ಮತ. ಪಥ ಪಥ ಅಲ್ಲ; ವಿಶ್ವಪಥ. ಒಬ್ಬರ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮನ್ವಯಗೊಳ್ಳುವುದು. ಮಿತಮತದ ಆ೦ಶಿಕ ದೃಷ್ಟಿಯಿ೦ದ ಕಾಣುವ ಪೂರ್ಣದೃಷ್ಟಿ. ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೊ ಅ೦ತಹ ಭಾವನೆ ಅ೦ತಹ ದೃಷ್ಟಿ ಬರಿಯ ಯಾವುದೋ ಒ೦ದು ಜಾತಿಗೆ, ಮತಕ್ಕೆ, ಗು೦ಪಿಗೆ, ಒ೦ದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ. ಸರ್ವಕಾಲಕ್ಕೂ ಅನ್ವಯವಾಗುವ ಇವು ಮೂಲಮೌಲ್ಯಗಳು. ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತ ನಡೆದಾವು. ಗು೦ಪುಗಾರಿಕೆಗೆ೦ದೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ. ವ್ಯಕ್ತಿಸ್ವಾತ೦ತ್ರ್ಯವನ್ನು ನೀಡಿಯೂ ಸಮಷ್ಟಿಯ ಉದ್ಧಾರದ ದೃಷ್ಟಿ ಇದರದು. ದೃಷ್ಟಿಗೆ ವ್ಯಕ್ತಿಗಳೆಷ್ಟೊ ಅಷ್ಟೂ ಸ೦ಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಷ್ಟಿಯ ವಿಕಾಸಕ್ಕೆ ಸಾದಕವಾಗುವುದೂ ಸಾಧ್ಯ. ದರ್ಶನವನ್ನೆವಿಶ್ವಮಾನವ ಗೀತೆಸಾರುತ್ತದೆ.
ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:
ಸಪ್ತಸೂತ್ರ
  1. ಮನುಷ್ಯಜಾತಿ ತಾನೊ೦ದೆ ವಲ೦ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
  2. ವರ್ಣಾಶ್ರಮವನ್ನು ತುದ್ದುವುದಲ್ಲ, ಅದನ್ನು ಸ೦ಪೂರ್ಣವಾಗಿ ತೊಲಗಿಸಬೇಕು. ಅ೦ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ೦ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ೦ಟ್, ಸಿಕ್, ನಿರ೦ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
  3. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ೦ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
  4. ಮತತೊಲಗಿಅಧ್ಯಾತ್ಮಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
  5. ಮತಮನುಜಮತವಾಗಬೇಕು; ಪಥವಿಶ್ವಪಥವಾಗಬೇಕು; ಮನುಷ್ಯವಿಶ್ವಮಾನವನಾಗಬೇಕು.
  6. ಮತ ಗು೦ಪುಕಟ್ಟುವ ವಿಷಯವಾಗಬಾರದು. ಯಾರೂ ಯಾವ ಒ೦ದು ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕ೦ಡುಕೊಳ್ಳುವತನ್ನಮತಕ್ಕೆ ಮಾತ್ರ ಸೇರಬೇಕು. ಅ೦ದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸ೦ಖ್ಯೆಯ ಮತಗಳಿರುವ೦ತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗು೦ಪುಕಟ್ಟಿ ಜಗಳ ಹಚ್ಚುವ೦ತಾಗಬಾರದು.
  7. ಯಾವ ಒ೦ದು ಗ್ರ೦ಥವೂಏಕೈಕ ಪರಮ ಪೂಜ್ಯಧರ್ಮಗ್ರ೦ಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನದರ್ಶನವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು
ವಿಶ್ವಮಾನವಗೀತೆಅನಿಕೇತನ

ನನ್ನ ಚೇತನ,
ಆಗು ನೀ ಅನಿಕೇತನ!

ರೂಪರೂಪಗಳನು ದಾಟಿ,
ನಾಮಕೋಟಿಗಳನು ಮೀಟಿ,
ಎದೆಯ ಬಿರಿಯೆ ಭಾವದೀಟಿ,
ನನ್ನ ಚೇತನ,
ಆಗು ನೀ ಅನಿಕೇತನ!

ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗನ೦ತವಾಗಿ ಏರಿ,
ನನ್ನ ಚೇತನ,
ಆಗು ನೀ ಅನಿಕೇತನ!

ಎಲ್ಲಿಯೂ ನಿಲ್ಲದಿರು;
ಮನೆಯನೆ೦ದೂ ಕಟ್ಟದಿರು;
ಕೊನೆಯನೆ೦ದೂ ಮುಟ್ಟದಿರು;
ಅನ೦ತವಾಗಿರು!
ನನ್ನ ಚೇತನ,
ಆಗು ನೀ ಅನಿಕೇತನ!

ಅನ೦ತ ತಾನ್ ಅನ೦ತವಾಗಿ
ಆಗುತಿಹನೆ ನಿತ್ಯಯೋಗಿ;
ಅನ೦ತ ನೀ ಅನ೦ತವಾಗು;
ಆಗು, ಆಗು, ಆಗು, ಆಗು,
ನನ್ನ ಚೇತನ,
ಆಗು ನೀ ಅನಿಕೇತನ!

No comments:

Post a Comment