🔸🔸🔸🔸🔸🔸🔸🔸🔸
ದಿನವಿಡೀ ಕುಳಿತುಕೊಂಡೇ ಇದ್ದರೆ ಹೃದಯಕ್ಕೆ ಅಪಾಯ!
ದಿನವಿಡಿ ಕುಳಿತುಕೊಂಡೇ ಕೆಲಸ ಮಾಡಿಕೊಂಡು ಮನೆಗೆ ಬಂದ ಬಳಿಕ ಮತ್ತೆ ಟಿವಿ ಮುಂದೆ ಕುಳಿತುಕೊಂಡು ರಾತ್ರಿ ನಿದ್ರೆ ಮಾಡುವ ತನಕವೂ ಹೀಗೆ ಕುಳಿತುಕೊಂಡೇ ಇರುವವರು ನೀವಾಗಿದ್ದರೆ ಇದರ ಬಗ್ಗೆ ಎಚ್ಚರಿಕೆ ವಹಿಸಿಕೊಳ್ಳುವುದು ತುಂಬಾ ಮುಖ್ಯ. ದಿನವಿಡೀ ಕುಳಿತು ಕೆಲಸ ಮಾಡುವವರು, ತಪ್ಪದೇ ಈ ಲೇಖನ ಓದಿ....
ಯಾಕೆಂದರೆ ಕುಳಿತುಕೊಂಡೇ ಇರುವವರಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಕುಳಿತೇ ಇದ್ದರೆ ಹೃದಯ ಮತ್ತು ಇತರ ಅಂಗಾಂಗಗಳ ಕಾರ್ಯಚಟುವಟಿಕೆಗೆ ಸಮಸ್ಯೆಯಾಗಲಿದೆ. ಅದರಲ್ಲೂ ದೀರ್ಘಕಾಲದ ತನಕ ಕುಳಿತೇ ಇದ್ದರೆ ಅದರಿಂದ ಹೃದಯಕ್ಕೆ ಹಾನಿಯಾಗಲಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕುಳಿತೇ ಇರುವುದರಿಂದ ಮುಂದೆ ಹೃದಯಕ್ಕೆ ಯಾವ್ಯಾವ ಸಮಸ್ಯೆಯಾಗಲಿದೆ ಎನ್ನುವುದನ್ನು ತಿಳಿದುಕೊಳ್ಳಿ. ಇದೇ ಕಾರಣಕ್ಕೆ 'ಹೃದ್ರೋಗ ಸಮಸ್ಯೆ' ಕಾಣಿಸಿಕೊಳ್ಳುವುದು!
ದೇಶಕ್ಕೆ ರಾಜಧಾನಿಯಿರುವಂತೆ ದೇಹಕ್ಕೆ ಕೂಡ ಹೃದಯವು ರಾಜಧಾನಿಯೆನ್ನಬಹುದು. ದೇಶ ಚೆನ್ನಾಗಿರಬೇಕಾದರೆ ರಾಜಧಾನಿ ಸರಿಯಿರಬೇಕು. ಅದೇ ಹೃದಯವು ಸರಿಯಾಗಿದ್ದರೆ ಎಲ್ಲವೂ ಸುಸೂತ್ರವಾಗಿದೆ ಎಂದರ್ಥ. ಹೃದಯವು ತನ್ನ ಕಾರ್ಯವನ್ನು ನಿಲ್ಲಿಸಿದರೆ ಆಗ ಜೀವ ಹೊರಟು ಹೋಗುತ್ತದೆ. ಹೃದಯದ ಆರೋಗ್ಯಕ್ಕೆ, ನಿತ್ಯ 'ದಾಳಿಂಬೆ ಜ್ಯೂಸ್' ಕುಡಿಯಿರಿ
ಸಂಪೂರ್ಣ ದೇಹವನ್ನು ನೋಡಿಕೊಳ್ಳುವಲ್ಲಿ ಹೃದಯವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಅದೇ ಹೃದಯವನ್ನು ನಾವು ಯಾವ ರೀತಿಯಿಂದ ನೋಡಿಕೊಳ್ಳುತ್ತಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. ಹೃದಯವನ್ನು ಆರೋಗ್ಯವಾಗಿಡುವಲ್ಲಿ ನಮ್ಮ ಪಾತ್ರ ಎಷ್ಟಿದೆ ಎಂದು ತಿಳಿದುಕೊಳ್ಳಲೇಬೇಕು. ಪುಟ್ಟ ಹೃದಯದ ಸ್ವಾಸ್ಥ್ಯಕ್ಕೆ-ಈ ಜ್ಯೂಸ್ ತಪ್ಪದೇ ಕುಡಿಯಿರಿ
ಎಣ್ಣೆ, ಎಣ್ಣೆಯುಕ್ತ ಆಹಾರ, ಅತಿಯಾದ ಮಾಂಸಾಹಾರ ಆಹಾರ ಇವುಗಳು ಹೃದಯದ ಆರೋಗ್ಯವನ್ನು ಕೆಡಿಸುವುದು. ಇದರಿಂದ ನಿಮ್ಮ ಹೃದಯಕ್ಕೆ ತುಂಬಾ ಹಾನಿಯಾಗಬಹುದು. ಹೃದಯದ ಆರೋಗ್ಯವನ್ನು ಯಾವ ರೀತಿಯಲ್ಲಿ ಮತ್ತು ಹೇಗೆ ಕಾಪಾಡಿಕೊಳ್ಳಬಹುದು ಎಂದು ತಿಳಿದುಕೊಳ್ಳಲು ನೀವು ಈ ಲೇಖನವನ್ನು ಮುಂದಕ್ಕೆ ಓದಲೇಬೇಕು.
ಅಡುಗೆಗೆ ಒಂದೇ ವಿಧದ ಎಣ್ಣೆ ಬಳಕೆ
ಈಗೀಗ ಕರಿದ ಪದಾರ್ಥಗಳೇ ಹೆಚ್ಚಿನವರಿಗೆ ಇಷ್ಟವಾಗುವ ಕಾರಣದಿಂದ ಎಣ್ಣೆಯು ಅತಿಯಾಗಿ ನಮ್ಮ ದೇಹವನ್ನು ಸೇರಿಕೊಳ್ಳುವುದು. ಇದರಿಂದ ಹೃದಯದ ಕಾಯಿಲೆ ಸಮಸ್ಯೆಯು ಹೆಚ್ಚಾಗಿರುತ್ತದೆ. ದೈನಂದಿನ ಆಹಾರ ಕ್ರಮದಲ್ಲಿ ಮೂರರಿಂದ ನಾಲ್ಕು ಚಮಚಕ್ಕಿಂತ ಹೆಚ್ಚಿನ ಎಣ್ಣೆ ಬಳಸಬೇಡಿ.
ಅಡುಗೆಗೆ ಒಂದೇ ವಿಧದ ಎಣ್ಣೆ ಬಳಕೆ
3-4 ತಿಂಗಳಿಗೊಮ್ಮೆ ಎಣ್ಣೆ ಬದಲಾಯಿಸುತ್ತಾ ಇರಿ. ತೆಂಗಿನ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಆಲಿವ್ ಎಣ್ಣೆ, ಸಾಸಿವೆ ಎಣ್ಣೆ ಹೀಗೆ ಬದಲಾಯಿಸುತ್ತಾ ಇದ್ದರೆ ವಿವಿಧ ರೀತಿಯ ಪೋಷಕಾಂಶಗಳು ನಿಮ್ಮ ದೇಹವನ್ನು ಸೇರಿಕೊಳ್ಳುತ್ತದೆ. ಇದರಿಂದ ಹೃದಯವು ಆರೋಗ್ಯವಾಗಿರುತ್ತದೆ.
ಊಟದ ಬಳಿಕ ಸಿಹಿ ತಿನ್ನುವುದು
ಭಾರತದಲ್ಲಿ ಹೆಚ್ಚಿನವರು ಊಟದ ಬಳಿಕ ಸಿಹಿ ತಿನ್ನುವಂತಹ ಅಭ್ಯಾಸವನ್ನು ಬೆಳೆಸಿಕೊಂಡಿರುತ್ತಾರೆ. ಆದರೆ ಇದರಿಂದ ರಕ್ತದ ಗ್ಲೂಕೋಸ್ ಮಟ್ಟ ಹೆಚ್ಚಾಗಿ ಮಧುಮೇಹ ಕಾಣಿಸಿಕೊಳ್ಳಬಹುದು. ಸಿಹಿಯಲ್ಲಿ ಹೆಚ್ಚಿನ ಕೊಬ್ಬು ಮತ್ತು ಸಕ್ಕರೆ ಇರುವುದರಿಂದ ಇದು ನಿಮ್ಮನ್ನು ಹೃದಯದ ಕಾಯಿಲೆಯ ಅಪಾಯಕ್ಕೆ ಒಡ್ಡಬಹುದು
ಅತಿಯಾಗಿ ಖಾರ ತಿನ್ನುವುದು
ಖಾರವಾಗಿರುವ ಮೆಣಸನ್ನು ತಿಂದರೆ ಅದರಿಂದ ತೂಕ ಕಳೆದುಕೊಳ್ಳಬಹುದು ಎಂದು ಹೇಳುತ್ತಾರೆ. ಆದರೆ ಕೆಂಪು ಮೆಣಸನ್ನು ಆಹಾರದಲ್ಲಿ ಅತಿಯಾಗಿ ಬಳಸುವುದು ಒಳ್ಳೆಯದಲ್ಲ. ಮೆಣಸು ವಿಶ್ರಾಂತಿಯಲ್ಲಿರುವ ಹೃದಯದ ಬಡಿತವನ್ನು ಕಡಿಮೆ ಮಾಡುವುದು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ.
ಉಪಹಾರಕ್ಕೆ ಎಣ್ಣೆಯ ಆಹಾರ
ಬೆಳಗ್ಗಿನ ಉಪಹಾರಕ್ಕೆ ಎಣ್ಣೆಯಲ್ಲಿ ಮಾಡಿದಂತಹ ತಿಂಡಿಗಳನ್ನು ತಿಂದರೆ ಅದರಿಂದ ಜೀರ್ಣಕ್ರಿಯೆಯು ಕಡಿಮೆಯಾಗುವುದು ಮತ್ತು ಹೊಟ್ಟೆ ತುಂಬದೆ ಇರುವುದರಿಂದ ನೀವು ಮತ್ತಷ್ಟು ತಿನ್ನುತ್ತಲೇ ಇರುತ್ತೀರಿ. ಇದರಿಂದ ಕ್ಯಾಲರಿ ಸೇವನೆ ಹೆಚ್ಚಾಗುವುದು. ಉಪಹಾರದಲ್ಲಿ ಹೆಚ್ಚಿನ ಪ್ರೋಟೀನ್ ಕಡಿಮೆ ಕಾರ್ಬೋಹೈಡ್ರೆಟ್ಸ್ ಮತ್ತು ಕೊಬ್ಬಿನಾಂಶ ಸ್ವಲ್ಪವೇ ಇರುವ ಆಹಾರವನ್ನು ಸೇವಿಸಿ.
ದಿನವಿಡೀ ಕುಳಿತುಕೊಂಡೇ ಇದ್ದರೆ ಹೃದಯಕ್ಕೆ ಅಪಾಯ!
ದಿನವಿಡಿ ಕುಳಿತುಕೊಂಡೇ ಕೆಲಸ ಮಾಡಿಕೊಂಡು ಮನೆಗೆ ಬಂದ ಬಳಿಕ ಮತ್ತೆ ಟಿವಿ ಮುಂದೆ ಕುಳಿತುಕೊಂಡು ರಾತ್ರಿ ನಿದ್ರೆ ಮಾಡುವ ತನಕವೂ ಹೀಗೆ ಕುಳಿತುಕೊಂಡೇ ಇರುವವರು ನೀವಾಗಿದ್ದರೆ ಇದರ ಬಗ್ಗೆ ಎಚ್ಚರಿಕೆ ವಹಿಸಿಕೊಳ್ಳುವುದು ತುಂಬಾ ಮುಖ್ಯ. ದಿನವಿಡೀ ಕುಳಿತು ಕೆಲಸ ಮಾಡುವವರು, ತಪ್ಪದೇ ಈ ಲೇಖನ ಓದಿ....
ಯಾಕೆಂದರೆ ಕುಳಿತುಕೊಂಡೇ ಇರುವವರಿಗೆ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಕುಳಿತೇ ಇದ್ದರೆ ಹೃದಯ ಮತ್ತು ಇತರ ಅಂಗಾಂಗಗಳ ಕಾರ್ಯಚಟುವಟಿಕೆಗೆ ಸಮಸ್ಯೆಯಾಗಲಿದೆ. ಅದರಲ್ಲೂ ದೀರ್ಘಕಾಲದ ತನಕ ಕುಳಿತೇ ಇದ್ದರೆ ಅದರಿಂದ ಹೃದಯಕ್ಕೆ ಹಾನಿಯಾಗಲಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕುಳಿತೇ ಇರುವುದರಿಂದ ಮುಂದೆ ಹೃದಯಕ್ಕೆ ಯಾವ್ಯಾವ ಸಮಸ್ಯೆಯಾಗಲಿದೆ ಎನ್ನುವುದನ್ನು ತಿಳಿದುಕೊಳ್ಳಿ. ಇದೇ ಕಾರಣಕ್ಕೆ 'ಹೃದ್ರೋಗ ಸಮಸ್ಯೆ' ಕಾಣಿಸಿಕೊಳ್ಳುವುದು!
ದೇಶಕ್ಕೆ ರಾಜಧಾನಿಯಿರುವಂತೆ ದೇಹಕ್ಕೆ ಕೂಡ ಹೃದಯವು ರಾಜಧಾನಿಯೆನ್ನಬಹುದು. ದೇಶ ಚೆನ್ನಾಗಿರಬೇಕಾದರೆ ರಾಜಧಾನಿ ಸರಿಯಿರಬೇಕು. ಅದೇ ಹೃದಯವು ಸರಿಯಾಗಿದ್ದರೆ ಎಲ್ಲವೂ ಸುಸೂತ್ರವಾಗಿದೆ ಎಂದರ್ಥ. ಹೃದಯವು ತನ್ನ ಕಾರ್ಯವನ್ನು ನಿಲ್ಲಿಸಿದರೆ ಆಗ ಜೀವ ಹೊರಟು ಹೋಗುತ್ತದೆ. ಹೃದಯದ ಆರೋಗ್ಯಕ್ಕೆ, ನಿತ್ಯ 'ದಾಳಿಂಬೆ ಜ್ಯೂಸ್' ಕುಡಿಯಿರಿ
ಸಂಪೂರ್ಣ ದೇಹವನ್ನು ನೋಡಿಕೊಳ್ಳುವಲ್ಲಿ ಹೃದಯವು ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಅದೇ ಹೃದಯವನ್ನು ನಾವು ಯಾವ ರೀತಿಯಿಂದ ನೋಡಿಕೊಳ್ಳುತ್ತಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ. ಹೃದಯವನ್ನು ಆರೋಗ್ಯವಾಗಿಡುವಲ್ಲಿ ನಮ್ಮ ಪಾತ್ರ ಎಷ್ಟಿದೆ ಎಂದು ತಿಳಿದುಕೊಳ್ಳಲೇಬೇಕು. ಪುಟ್ಟ ಹೃದಯದ ಸ್ವಾಸ್ಥ್ಯಕ್ಕೆ-ಈ ಜ್ಯೂಸ್ ತಪ್ಪದೇ ಕುಡಿಯಿರಿ
ಎಣ್ಣೆ, ಎಣ್ಣೆಯುಕ್ತ ಆಹಾರ, ಅತಿಯಾದ ಮಾಂಸಾಹಾರ ಆಹಾರ ಇವುಗಳು ಹೃದಯದ ಆರೋಗ್ಯವನ್ನು ಕೆಡಿಸುವುದು. ಇದರಿಂದ ನಿಮ್ಮ ಹೃದಯಕ್ಕೆ ತುಂಬಾ ಹಾನಿಯಾಗಬಹುದು. ಹೃದಯದ ಆರೋಗ್ಯವನ್ನು ಯಾವ ರೀತಿಯಲ್ಲಿ ಮತ್ತು ಹೇಗೆ ಕಾಪಾಡಿಕೊಳ್ಳಬಹುದು ಎಂದು ತಿಳಿದುಕೊಳ್ಳಲು ನೀವು ಈ ಲೇಖನವನ್ನು ಮುಂದಕ್ಕೆ ಓದಲೇಬೇಕು.
ಅಡುಗೆಗೆ ಒಂದೇ ವಿಧದ ಎಣ್ಣೆ ಬಳಕೆ
ಈಗೀಗ ಕರಿದ ಪದಾರ್ಥಗಳೇ ಹೆಚ್ಚಿನವರಿಗೆ ಇಷ್ಟವಾಗುವ ಕಾರಣದಿಂದ ಎಣ್ಣೆಯು ಅತಿಯಾಗಿ ನಮ್ಮ ದೇಹವನ್ನು ಸೇರಿಕೊಳ್ಳುವುದು. ಇದರಿಂದ ಹೃದಯದ ಕಾಯಿಲೆ ಸಮಸ್ಯೆಯು ಹೆಚ್ಚಾಗಿರುತ್ತದೆ. ದೈನಂದಿನ ಆಹಾರ ಕ್ರಮದಲ್ಲಿ ಮೂರರಿಂದ ನಾಲ್ಕು ಚಮಚಕ್ಕಿಂತ ಹೆಚ್ಚಿನ ಎಣ್ಣೆ ಬಳಸಬೇಡಿ.
ಅಡುಗೆಗೆ ಒಂದೇ ವಿಧದ ಎಣ್ಣೆ ಬಳಕೆ
3-4 ತಿಂಗಳಿಗೊಮ್ಮೆ ಎಣ್ಣೆ ಬದಲಾಯಿಸುತ್ತಾ ಇರಿ. ತೆಂಗಿನ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಆಲಿವ್ ಎಣ್ಣೆ, ಸಾಸಿವೆ ಎಣ್ಣೆ ಹೀಗೆ ಬದಲಾಯಿಸುತ್ತಾ ಇದ್ದರೆ ವಿವಿಧ ರೀತಿಯ ಪೋಷಕಾಂಶಗಳು ನಿಮ್ಮ ದೇಹವನ್ನು ಸೇರಿಕೊಳ್ಳುತ್ತದೆ. ಇದರಿಂದ ಹೃದಯವು ಆರೋಗ್ಯವಾಗಿರುತ್ತದೆ.
ಊಟದ ಬಳಿಕ ಸಿಹಿ ತಿನ್ನುವುದು
ಭಾರತದಲ್ಲಿ ಹೆಚ್ಚಿನವರು ಊಟದ ಬಳಿಕ ಸಿಹಿ ತಿನ್ನುವಂತಹ ಅಭ್ಯಾಸವನ್ನು ಬೆಳೆಸಿಕೊಂಡಿರುತ್ತಾರೆ. ಆದರೆ ಇದರಿಂದ ರಕ್ತದ ಗ್ಲೂಕೋಸ್ ಮಟ್ಟ ಹೆಚ್ಚಾಗಿ ಮಧುಮೇಹ ಕಾಣಿಸಿಕೊಳ್ಳಬಹುದು. ಸಿಹಿಯಲ್ಲಿ ಹೆಚ್ಚಿನ ಕೊಬ್ಬು ಮತ್ತು ಸಕ್ಕರೆ ಇರುವುದರಿಂದ ಇದು ನಿಮ್ಮನ್ನು ಹೃದಯದ ಕಾಯಿಲೆಯ ಅಪಾಯಕ್ಕೆ ಒಡ್ಡಬಹುದು
ಅತಿಯಾಗಿ ಖಾರ ತಿನ್ನುವುದು
ಖಾರವಾಗಿರುವ ಮೆಣಸನ್ನು ತಿಂದರೆ ಅದರಿಂದ ತೂಕ ಕಳೆದುಕೊಳ್ಳಬಹುದು ಎಂದು ಹೇಳುತ್ತಾರೆ. ಆದರೆ ಕೆಂಪು ಮೆಣಸನ್ನು ಆಹಾರದಲ್ಲಿ ಅತಿಯಾಗಿ ಬಳಸುವುದು ಒಳ್ಳೆಯದಲ್ಲ. ಮೆಣಸು ವಿಶ್ರಾಂತಿಯಲ್ಲಿರುವ ಹೃದಯದ ಬಡಿತವನ್ನು ಕಡಿಮೆ ಮಾಡುವುದು ಮತ್ತು ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ.
ಉಪಹಾರಕ್ಕೆ ಎಣ್ಣೆಯ ಆಹಾರ
ಬೆಳಗ್ಗಿನ ಉಪಹಾರಕ್ಕೆ ಎಣ್ಣೆಯಲ್ಲಿ ಮಾಡಿದಂತಹ ತಿಂಡಿಗಳನ್ನು ತಿಂದರೆ ಅದರಿಂದ ಜೀರ್ಣಕ್ರಿಯೆಯು ಕಡಿಮೆಯಾಗುವುದು ಮತ್ತು ಹೊಟ್ಟೆ ತುಂಬದೆ ಇರುವುದರಿಂದ ನೀವು ಮತ್ತಷ್ಟು ತಿನ್ನುತ್ತಲೇ ಇರುತ್ತೀರಿ. ಇದರಿಂದ ಕ್ಯಾಲರಿ ಸೇವನೆ ಹೆಚ್ಚಾಗುವುದು. ಉಪಹಾರದಲ್ಲಿ ಹೆಚ್ಚಿನ ಪ್ರೋಟೀನ್ ಕಡಿಮೆ ಕಾರ್ಬೋಹೈಡ್ರೆಟ್ಸ್ ಮತ್ತು ಕೊಬ್ಬಿನಾಂಶ ಸ್ವಲ್ಪವೇ ಇರುವ ಆಹಾರವನ್ನು ಸೇವಿಸಿ.
No comments:
Post a Comment