*ತಟ್ಟೆಯನ್ನು ತೊಡೆಯ ಮೇಲೆ ಇಟ್ಟುಕೊಂಡು ಏಕೆ ಊಟವನ್ನು ಮಾಡಬಾರದು?*
೧. ಅನ್ನವು ‘ಪೂರ್ಣಬ್ರಹ್ಮ’ವಾಗಿರುವುದರಿಂದ ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವನ್ನಿಟ್ಟುಕೊಂಡು ಊಟ ಮಾಡಿದರೆ ಅನ್ನದಲ್ಲಿನ ದೇವತ್ವಕ್ಕೆ ಅಗೌರವ ತೋರಿದಂತಾಗಿ ಅನ್ನಬ್ರಹ್ಮದಲ್ಲಿನ ಸಾತ್ತ್ವಿಕತೆಯ ಲಾಭವು ಅಪೇಕ್ಷಿತ ರೀತಿಯಲ್ಲಾಗುವುದಿಲ್ಲ.
೨. ತೊಡೆಯ ಮೇಲೆ ತಟ್ಟೆಯನ್ನಿಟ್ಟು ಅನ್ನವನ್ನು ಸೇವಿಸಿದರೆ, ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವದ ಅಂತರ್ಮನಸ್ಸಿನ ವಾಸನೆಯ ವಿಚಾರಗಳಿಗನುಸಾರ ಪ್ರಕ್ಷೇಪಿತವಾಗುವ ಲಹರಿಗಳು ಅನ್ನದ ಮೂಲಕ ದೇಹದಲ್ಲಿ ಸಂಕ್ರಮಿತವಾಗುತ್ತವೆ. ಈ ಪ್ರಕ್ರಿಯೆಯಲ್ಲಿ ಜೀವವು ತನ್ನ ರಜ-ತಮಾತ್ಮಕ ಲಹರಿಯುಕ್ತ ಕೋಶದಲ್ಲಿ ಅನ್ನವನ್ನಿಟ್ಟುಕೊಂಡು ಸೇವಿಸುತ್ತಿರುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗುವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.
೩. ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ. ತೊಡೆಯ ಮೇಲೆ ತಟ್ಟೆಯನ್ನಿಟ್ಟು ಊಟವನ್ನು ಮಾಡುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸುಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗಬಹುದು, ಆದುದರಿಂದ ಊಟದ ತಟ್ಟೆಯನ್ನು ತೊಡೆಗಳ ಮೇಲೆ ಇಟ್ಟುಕೊಂಡು ಊಟವನ್ನು ಮಾಡಬಾರದು.
(ಆಧಾರ: ಸನಾತನ ಸಂಸ್ಥೆಯ ಗ್ರಂಥ ‘ಭೋಜನಕ್ಕೆ ಸಂಬಂಧಿಸಿದ ಆಚಾರಗಳು’)
*ಹೊಸ್ತಿಲಿನ ಮೇಲೆ ಕುಳಿತುಕೊಂಡು ಏಕೆ ಸೀನಬಾರದು?*
ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನುವುದರಿಂದ ಉತ್ಪನ್ನವಾಗುವ ನಾದಶಕ್ತಿಯಿಂದ ಹೊಸ್ತಿಲಿನಲ್ಲಿನ ರಜ-ತಮಾತ್ಮಕ ಲಹರಿಗಳು ಕಾರ್ಯನಿರತವಾಗುತ್ತವೆ, ಹಾಗೆಯೇ ಸೀನುವುದರಿಂದ ಪ್ರಕ್ಷೇಪಿತವಾಗುವ ವಾಯುತತ್ತ್ವದ ಲಹರಿಗಳಿಂದ ಹೊಸ್ತಿಲಿನಲ್ಲಿನ ರಜ-ತಮಾತ್ಮಕ ಲಹರಿಗಳು ಕೆಳಗಿನ ದಿಕ್ಕಿನಲ್ಲಿ (ಭೂಮಿಯ ಕಡೆಗೆ) ಪ್ರಕ್ಷೇಪಿತವಾಗದೆ ಮೇಲಿನ ದಿಕ್ಕಿನಲ್ಲಿ (ಆಕಾಶದೆಡೆಗೆ) ಪ್ರಕ್ಷೇಪಿತವಾಗುತ್ತವೆ. ಇದರಿಂದ ವಾಸ್ತುವಿನಲ್ಲಿ ತೊಂದರೆದಾಯಕ ಲಹರಿಗಳ ಸಂಚಾರವು ಹೆಚ್ಚಾಗುತ್ತದೆ; ಆದುದರಿಂದ ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನಬಾರದು.
ಒಂದು ವೇಳೆ ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನಿದರೆ ಹೊಸ್ತಿಲಿನ ಮೇಲೆ ನೀರನ್ನು ಹಾಕಬೇಕೆಂದು ಹೇಳುತ್ತಾರೆ, ಇದರ ಕಾರಣವೇನು?
ಹೊಸ್ತಿಲಿನ ಮೇಲೆ ನೀರನ್ನು ಹಾಕುವುದೆಂದರೆ ಒಂದು ರೀತಿಯಲ್ಲಿ ಮೇಲಿನ ದಿಕ್ಕಿನಲ್ಲಿ ಪ್ರಕ್ಷೇಪಿತವಾಗುವ ರಜ-ತಮಾತ್ಮಕ ಲಹರಿಗಳನ್ನು ಶಾಂತ ಮಾಡುವುದಾಗಿದೆ. ನೀರಿನಲ್ಲಿನ ಪೃಥ್ವಿ ಮತ್ತು ಆಪತತ್ತ್ವಗಳ ಲಹರಿಗಳಿಂದ, ವಾಯುತತ್ತ್ವದ ಆಧಾರದಿಂದ ಮೇಲಿನ ದಿಕ್ಕಿನಲ್ಲಿ ಚಲಿಸುತ್ತಿರುವ ಲಹರಿಗಳಿಗೆ ಜಡತ್ವವು ಪ್ರಾಪ್ತವಾಗುತ್ತದೆ. ಇದರಿಂದ ಆ ಲಹರಿಗಳು ಮತ್ತೆ ಭೂಮಿಯ ಕಡೆಗೆ ಚಲಿಸತೊಡಗುತ್ತವೆ. ಆದುದರಿಂದ ಒಂದು ವೇಳೆ ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನಿದರೆ ಕೂಡಲೇ ಅದರ ಮೇಲೆ ನೀರು ಹಾಕಿ ರಜ-ತಮಾತ್ಮಕ ಲಹರಿಗಳ ಶಮನ ಮಾಡಬೇಕು.
೧. ಅನ್ನವು ‘ಪೂರ್ಣಬ್ರಹ್ಮ’ವಾಗಿರುವುದರಿಂದ ಅದಕ್ಕೆ ದೇವತ್ವದ ಗೌರವವನ್ನು ಕೊಡಬೇಕು. ತೊಡೆಯ ಮೇಲೆ ಅನ್ನವನ್ನಿಟ್ಟುಕೊಂಡು ಊಟ ಮಾಡಿದರೆ ಅನ್ನದಲ್ಲಿನ ದೇವತ್ವಕ್ಕೆ ಅಗೌರವ ತೋರಿದಂತಾಗಿ ಅನ್ನಬ್ರಹ್ಮದಲ್ಲಿನ ಸಾತ್ತ್ವಿಕತೆಯ ಲಾಭವು ಅಪೇಕ್ಷಿತ ರೀತಿಯಲ್ಲಾಗುವುದಿಲ್ಲ.
೨. ತೊಡೆಯ ಮೇಲೆ ತಟ್ಟೆಯನ್ನಿಟ್ಟು ಅನ್ನವನ್ನು ಸೇವಿಸಿದರೆ, ಶರೀರದ ಸಂಪರ್ಕವು ಅನ್ನದೊಂದಿಗೆ ಹೆಚ್ಚಿನ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವದ ಅಂತರ್ಮನಸ್ಸಿನ ವಾಸನೆಯ ವಿಚಾರಗಳಿಗನುಸಾರ ಪ್ರಕ್ಷೇಪಿತವಾಗುವ ಲಹರಿಗಳು ಅನ್ನದ ಮೂಲಕ ದೇಹದಲ್ಲಿ ಸಂಕ್ರಮಿತವಾಗುತ್ತವೆ. ಈ ಪ್ರಕ್ರಿಯೆಯಲ್ಲಿ ಜೀವವು ತನ್ನ ರಜ-ತಮಾತ್ಮಕ ಲಹರಿಯುಕ್ತ ಕೋಶದಲ್ಲಿ ಅನ್ನವನ್ನಿಟ್ಟುಕೊಂಡು ಸೇವಿಸುತ್ತಿರುತ್ತದೆ. ಇದರಿಂದ ಜೀವವು ಅನ್ನದಿಂದ ಸಿಗುವ ಭೂಮಿ ಲಹರಿಗಳ ಲಾಭದಿಂದ ವಂಚಿತವಾಗುತ್ತದೆ.
೩. ಪಾದಗಳ ಸ್ಪರ್ಶದಿಂದ ಪಾತಾಳದಿಂದ ಬರುವ ತೊಂದರೆದಾಯಕ ಸ್ಪಂದನಗಳು ಹೆಚ್ಚಾಗಿ ಮಂಡಿಗಳ ಟೊಳ್ಳಿನಲ್ಲಿ ತಮ್ಮ ಸ್ಥಾನವನ್ನು ಮಾಡಿಕೊಳ್ಳುತ್ತವೆ. ತೊಡೆಯ ಮೇಲೆ ತಟ್ಟೆಯನ್ನಿಟ್ಟು ಊಟವನ್ನು ಮಾಡುವುದರಿಂದ ಸ್ಪರ್ಶದ ಮಾಧ್ಯಮದಿಂದ ಕಾಲು, ಮಂಡಿ ಮತ್ತು ತೊಡೆಗಳಲ್ಲಿ ಸುಪ್ತವಾಗಿರುವ ಸ್ಪಂದನಗಳು ಕಾರ್ಯನಿರತವಾಗಿ ಅನ್ನವು ಅಪವಿತ್ರವಾಗಬಹುದು, ಆದುದರಿಂದ ಊಟದ ತಟ್ಟೆಯನ್ನು ತೊಡೆಗಳ ಮೇಲೆ ಇಟ್ಟುಕೊಂಡು ಊಟವನ್ನು ಮಾಡಬಾರದು.
(ಆಧಾರ: ಸನಾತನ ಸಂಸ್ಥೆಯ ಗ್ರಂಥ ‘ಭೋಜನಕ್ಕೆ ಸಂಬಂಧಿಸಿದ ಆಚಾರಗಳು’)
*ಹೊಸ್ತಿಲಿನ ಮೇಲೆ ಕುಳಿತುಕೊಂಡು ಏಕೆ ಸೀನಬಾರದು?*
ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನುವುದರಿಂದ ಉತ್ಪನ್ನವಾಗುವ ನಾದಶಕ್ತಿಯಿಂದ ಹೊಸ್ತಿಲಿನಲ್ಲಿನ ರಜ-ತಮಾತ್ಮಕ ಲಹರಿಗಳು ಕಾರ್ಯನಿರತವಾಗುತ್ತವೆ, ಹಾಗೆಯೇ ಸೀನುವುದರಿಂದ ಪ್ರಕ್ಷೇಪಿತವಾಗುವ ವಾಯುತತ್ತ್ವದ ಲಹರಿಗಳಿಂದ ಹೊಸ್ತಿಲಿನಲ್ಲಿನ ರಜ-ತಮಾತ್ಮಕ ಲಹರಿಗಳು ಕೆಳಗಿನ ದಿಕ್ಕಿನಲ್ಲಿ (ಭೂಮಿಯ ಕಡೆಗೆ) ಪ್ರಕ್ಷೇಪಿತವಾಗದೆ ಮೇಲಿನ ದಿಕ್ಕಿನಲ್ಲಿ (ಆಕಾಶದೆಡೆಗೆ) ಪ್ರಕ್ಷೇಪಿತವಾಗುತ್ತವೆ. ಇದರಿಂದ ವಾಸ್ತುವಿನಲ್ಲಿ ತೊಂದರೆದಾಯಕ ಲಹರಿಗಳ ಸಂಚಾರವು ಹೆಚ್ಚಾಗುತ್ತದೆ; ಆದುದರಿಂದ ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನಬಾರದು.
ಒಂದು ವೇಳೆ ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನಿದರೆ ಹೊಸ್ತಿಲಿನ ಮೇಲೆ ನೀರನ್ನು ಹಾಕಬೇಕೆಂದು ಹೇಳುತ್ತಾರೆ, ಇದರ ಕಾರಣವೇನು?
ಹೊಸ್ತಿಲಿನ ಮೇಲೆ ನೀರನ್ನು ಹಾಕುವುದೆಂದರೆ ಒಂದು ರೀತಿಯಲ್ಲಿ ಮೇಲಿನ ದಿಕ್ಕಿನಲ್ಲಿ ಪ್ರಕ್ಷೇಪಿತವಾಗುವ ರಜ-ತಮಾತ್ಮಕ ಲಹರಿಗಳನ್ನು ಶಾಂತ ಮಾಡುವುದಾಗಿದೆ. ನೀರಿನಲ್ಲಿನ ಪೃಥ್ವಿ ಮತ್ತು ಆಪತತ್ತ್ವಗಳ ಲಹರಿಗಳಿಂದ, ವಾಯುತತ್ತ್ವದ ಆಧಾರದಿಂದ ಮೇಲಿನ ದಿಕ್ಕಿನಲ್ಲಿ ಚಲಿಸುತ್ತಿರುವ ಲಹರಿಗಳಿಗೆ ಜಡತ್ವವು ಪ್ರಾಪ್ತವಾಗುತ್ತದೆ. ಇದರಿಂದ ಆ ಲಹರಿಗಳು ಮತ್ತೆ ಭೂಮಿಯ ಕಡೆಗೆ ಚಲಿಸತೊಡಗುತ್ತವೆ. ಆದುದರಿಂದ ಒಂದು ವೇಳೆ ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನಿದರೆ ಕೂಡಲೇ ಅದರ ಮೇಲೆ ನೀರು ಹಾಕಿ ರಜ-ತಮಾತ್ಮಕ ಲಹರಿಗಳ ಶಮನ ಮಾಡಬೇಕು.
No comments:
Post a Comment