Wednesday, 15 February 2017

ಸಾಮಾಜಿಕ ಜಾಲತಾಣ ಬಳಕೆದಾರರೇ ಎಚ್ಚರ..!

*ಸಾಮಾಜಿಕ ಜಾಲತಾಣ ಬಳಕೆದಾರರೇ ಎಚ್ಚರ..!*

 Wednesday, 15.02.2017, 9:10 AM    ವಿಜಯವಾಣಿ ಸುದ್ದಿಜಾಲ


ಬೆಂಗಳೂರು: ಫೇಸ್​ಬುಕ್, ಟ್ವಿಟರ್, ವಾಟ್ಸ್​ಆಪ್ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶ, ಅವಹೇಳನಕಾರಿ ಹೇಳಿಕೆ ಹಾಗೂ ಪ್ರಚೋದನಕಾರಿ ಸ್ಟೇಟಸ್ ಬಿತ್ತರಿಸುವವರಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮಾಜದ ಸ್ವಾಸ್ಥ್ಯ್ಕೆ ಧಕ್ಕೆ ತರುವಂಥ, ಸಂಘ ಸಂಸ್ಥೆಗಳ ಹಾಗೂ ವ್ಯಕ್ತಿಗತ ನಿಂದನೆ ಮಾಡುವಂಥ ಸಂದೇಶ, ಫೋಟೊ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುವವರ ವಿರುದ್ಧ ಐಪಿಸಿ ಸೆಕ್ಷನ್ 153(ಎ) ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಪಶ್ಚಿಮ ವಲಯ (ಮಂಗಳೂರು) ಐಜಿಪಿ ಪಿ. ಹರಿಶೇಖರನ್ ಎಚ್ಚರಿಕೆ ನೀಡಿದ್ದಾರೆ. ಇದೇ ಮಾದರಿಯಲ್ಲಿ ಎಲ್ಲ ಪೊಲೀಸ್ ಅಧಿಕಾರಿ ಗಳೂ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ. ಮಂಗಳೂರು ಭಾಗದಲ್ಲಿ ಜಾಲತಾಣಗಳ ದುರುಪಯೋಗ ಹೆಚ್ಚಿದೆ. ಈ ಪ್ರಕರಣಗಳಿಗೆ ತಾಂತ್ರಿಕ ಸಾಕ್ಷ್ಯಾಧಾರ ಲಭ್ಯವಾಗಲಿದೆ. ಆರೋಪಿಗಳು ಕಾನೂನು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಆರೋಪ ಸಾಬೀತಾದರೆ *ಕನಿಷ್ಠ 3 ವರ್ಷ ಸಜೆ ಮತ್ತು ದಂಡ ವಿಧಿಸಲು ಕೋರ್ಟ್​ಗೆ ಅವಕಾಶ ಇರುವುದಾಗಿ ಹರಿಶೇಖರನ್ ‘ವಿಜಯವಾಣಿ’ಗೆ ತಿಳಿಸಿದರು.* ತಪ್ಪಿತಸ್ಥರ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಲಾಗುವುದು ಎಂದೂ ಹೇಳಿದರು.

No comments:

Post a Comment