*ಒಬಿಸಿ ಕೆನೆಪದರದ ಆದಾಯಮಿತಿ 8 ಲಕ್ಷಕ್ಕೆ ಹೆಚ್ಚಳ*
Vijaya Karnataka | Updated Sep 14, 2017, 07:57 AM IST
ಹೊಸದಿಲ್ಲಿ: ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮೀಸಲಾತಿಯಲ್ಲಿ ಕೆನೆಪದರ ಆದಾಯಮಿತಿಯನ್ನು 6 ಲಕ್ಷದಿಂದ 8 ಲಕ್ಷ ರೂ.ಗಳಿಗೆ ಏರಿಸಲಾಗಿದೆ ಎಂದು ಅಧಧಿಕೃತ ಮೂಲಗಳು ತಿಳಿಸಿವೆ.
ಸತತ ಮೂರು ವರ್ಷಗಳ ಕಾಲ 8 ಲಕ್ಷ ರೂಪಾಯಿಗಳಿಗಿಂತ ಅಧಿಧಿಕ ವಾರ್ಷಿಕ ಆದಾಯ ಹೊಂದಿದ ವ್ಯಕ್ತಿಯನ್ನು ಕೆನೆಪದರ ವ್ಯಾಪ್ತಿಗೆ ಸೇರಿಸಲಾಗುತ್ತದೆ. ಅಂಥವರಿಗೆ ಯಾವುದೇ ಮೀಸಲಾತಿ ಸೌಲಭ್ಯ ದೊರಕುವುದಿಲ್ಲ. 'ಹಿಂದುಳಿದ ವರ್ಗಗಳಲ್ಲಿ ಕೆನೆಪದರವನ್ನು ಪರಿಗಣಿಸುವ ನಿಟ್ಟಿನಲ್ಲಿ ಕನಿಷ್ಠ ಆದಾಯಮಿತಿಯನ್ನು 6 ರಿಂದ 8 ಲಕ್ಷ ರೂ.ಗೆ ಏರಿಸಲಾಗಿದೆ,' ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. 1993ರಲ್ಲಿ 1 ಲಕ್ಷ ರೂ.ಗಳಿಗೆ ಇದ್ದ ಈ ಮಿತಿ, 2004ರಲ್ಲಿ 2.5 ಲಕ್ಷಕ್ಕೆ, ಬಳಿಕ 2008ರಲ್ಲಿ 4.5 ಲಕ್ಷಕ್ಕೆ ಏರಿಸಲಾಗಿತ್ತು. 2013 ರಲ್ಲಿ 6 ಲಕ್ಷ ರೂ.ಗೆ ಏರಿಸಲಾಗಿದ್ದ ಆದಾಯಮಿತಿಯನ್ನು ಈಗ 8 ಲಕ್ಷಕ್ಕೆ ಏರಿಸಲಾಗಿದೆ.
ಆ. 23ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವಿಚಾರವನ್ನು ಕೇಂದ್ರ ಸಂಪುಟದ ಮುಂದೆ ಪ್ರಸ್ತಾಪಿಸಿದ್ದರು. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯವೂ ಇದಕ್ಕೆ ಸಮ್ಮತಿ ಸೂಚಿಸಿದ್ದು, 'ಇತರೆ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ,' ಎಂದಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ವಿಧೇಯಕವನ್ನು ಸರಕಾರ ಪಾರ್ಲಿಮೆಂಟಿನಲ್ಲಿ ಪ್ರಸ್ತಾಪಿಸಿದೆ. ಅಲ್ಲದೆ ಸಂವಿಧಾನದ 340 ವಿಧಿಯ ಪ್ರಕಾರ ಒಬಿಸಿಗಳನ್ನು ವಿಂಗಡಿಸಿ ಅದರಲ್ಲೇ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡುವ ಕುರಿತು ಚರ್ಚಿಸಲಾಗುತ್ತಿದೆ ಎನ್ನಲಾಗಿದೆ.
Vijaya Karnataka | Updated Sep 14, 2017, 07:57 AM IST
ಹೊಸದಿಲ್ಲಿ: ಇತರೆ ಹಿಂದುಳಿದ ವರ್ಗಗಳ(ಒಬಿಸಿ) ಮೀಸಲಾತಿಯಲ್ಲಿ ಕೆನೆಪದರ ಆದಾಯಮಿತಿಯನ್ನು 6 ಲಕ್ಷದಿಂದ 8 ಲಕ್ಷ ರೂ.ಗಳಿಗೆ ಏರಿಸಲಾಗಿದೆ ಎಂದು ಅಧಧಿಕೃತ ಮೂಲಗಳು ತಿಳಿಸಿವೆ.
ಸತತ ಮೂರು ವರ್ಷಗಳ ಕಾಲ 8 ಲಕ್ಷ ರೂಪಾಯಿಗಳಿಗಿಂತ ಅಧಿಧಿಕ ವಾರ್ಷಿಕ ಆದಾಯ ಹೊಂದಿದ ವ್ಯಕ್ತಿಯನ್ನು ಕೆನೆಪದರ ವ್ಯಾಪ್ತಿಗೆ ಸೇರಿಸಲಾಗುತ್ತದೆ. ಅಂಥವರಿಗೆ ಯಾವುದೇ ಮೀಸಲಾತಿ ಸೌಲಭ್ಯ ದೊರಕುವುದಿಲ್ಲ. 'ಹಿಂದುಳಿದ ವರ್ಗಗಳಲ್ಲಿ ಕೆನೆಪದರವನ್ನು ಪರಿಗಣಿಸುವ ನಿಟ್ಟಿನಲ್ಲಿ ಕನಿಷ್ಠ ಆದಾಯಮಿತಿಯನ್ನು 6 ರಿಂದ 8 ಲಕ್ಷ ರೂ.ಗೆ ಏರಿಸಲಾಗಿದೆ,' ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಬುಧವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. 1993ರಲ್ಲಿ 1 ಲಕ್ಷ ರೂ.ಗಳಿಗೆ ಇದ್ದ ಈ ಮಿತಿ, 2004ರಲ್ಲಿ 2.5 ಲಕ್ಷಕ್ಕೆ, ಬಳಿಕ 2008ರಲ್ಲಿ 4.5 ಲಕ್ಷಕ್ಕೆ ಏರಿಸಲಾಗಿತ್ತು. 2013 ರಲ್ಲಿ 6 ಲಕ್ಷ ರೂ.ಗೆ ಏರಿಸಲಾಗಿದ್ದ ಆದಾಯಮಿತಿಯನ್ನು ಈಗ 8 ಲಕ್ಷಕ್ಕೆ ಏರಿಸಲಾಗಿದೆ.
ಆ. 23ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಈ ವಿಚಾರವನ್ನು ಕೇಂದ್ರ ಸಂಪುಟದ ಮುಂದೆ ಪ್ರಸ್ತಾಪಿಸಿದ್ದರು. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವಾಲಯವೂ ಇದಕ್ಕೆ ಸಮ್ಮತಿ ಸೂಚಿಸಿದ್ದು, 'ಇತರೆ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ,' ಎಂದಿದೆ. ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ವಿಧೇಯಕವನ್ನು ಸರಕಾರ ಪಾರ್ಲಿಮೆಂಟಿನಲ್ಲಿ ಪ್ರಸ್ತಾಪಿಸಿದೆ. ಅಲ್ಲದೆ ಸಂವಿಧಾನದ 340 ವಿಧಿಯ ಪ್ರಕಾರ ಒಬಿಸಿಗಳನ್ನು ವಿಂಗಡಿಸಿ ಅದರಲ್ಲೇ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡುವ ಕುರಿತು ಚರ್ಚಿಸಲಾಗುತ್ತಿದೆ ಎನ್ನಲಾಗಿದೆ.