Saturday, 24 February 2018

ಜೀವನ ಬೇಜಾರು ಅನ್ನೋರು ಬುದ್ಧನ ಈ 19 ವಿಷಯಗಳನ್ನ ತಲೇಲಿ ಇಟ್ಕೊಂಡ್ರೆ ಒಳ್ಳೇದು

ಜೀವನ ಬೇಜಾರು ಅನ್ನೋರು ಬುದ್ಧನ ಈ 19 ವಿಷಯಗಳನ್ನ ತಲೇಲಿ ಇಟ್ಕೊಂಡ್ರೆ ಒಳ್ಳೇದು


👉🏾1.ಒಳ್ಳೆಯವರಾಗಿರಿ ಆದರೆ ಅದನ್ನು ಸಾಬೀತುಪಡಿಸವಲ್ಲಿಯೇ ನಿಮ್ಮ ಜೀವನವನ್ನು ಮತ್ತು ಸಮಯವನ್ನು ವ್ಯರ್ಥ ಮಾಡಬೇಡಿ.

👉🏾2.ನೀವೇ ನಿಮ್ಮ ಜೀವನದ ಚಾಲಕರು ಆ ಚಾಲನೆಯ ಅಧಿಕಾರವನ್ನು ಮತ್ತು ಆ ಸ್ಥಳವನ್ನು ಬೇರೆಯವರು ಕದಿಯಲು ಅವಕಾಶ ಮಾಡಿಕೊಡಬೇಡಿ.

👉🏾3.ಯಾವತ್ತೂ ಬೆರೆಯವರಲ್ಲಿ ಕ್ಷಮೆ ಕೇಳಬೇಡಿ ಯಾಕೆಂದರೆ ಅವರು ನಿಮ್ಮ ಮಾತನ್ನು ತಪ್ಪು ಅರ್ಥ ಮಾಡಿಕೊಂಡರೆ ನೀವ್ಯಾಕೆಕ್ಷಮೆ ಕೇಳಬೇಕು.

👉🏾4.ನಾವು ಒಂಟಿಯಾಗಿ ಇದ್ದರೆ ಅದರ ಅರ್ಥ ನಾವು ಒಂಟಿಯಾಗಿದ್ದೇವೆ ಎಂದು ಅಲ್ಲ.ಅದರ ಅರ್ಥ ನಾವು ಒಬ್ಬರೇ ಎಲ್ಲಾ ವಿಷಯಗಳನ್ನು ಎದುರಿಸುವ ಸಾಮರ್ಥ್ಯ ನಮಗಿದೆ ಎಂದು.

👉🏾5.ಎಲ್ಲೇ ಆಗಲಿ ನೀವು ಒಂದೇ ತರದ ವ್ಯಕ್ತಿತ್ವವನ್ನು ಕಾಪಾಡಿಕೊಂಡು ಒಂದೇ ತರನಾದ ವ್ಯಕ್ತಿಯಾಗಿರಿ ಅದು ನಿಮ್ಮ ಸ್ವಂತ ವಿಷಯದಲ್ಲಾಗಲಿ,ಸರ್ವಜನಿಕವಾಗಲಿ ಅಥವಾ ಖಾಸಗಿಯಾಗಲಿ.

👉🏾6. ಹಣ ಮನುಷ್ಯರ ಜೀವನದ ಒಂದು ಅತೀ ಕೆಟ್ಟ ಸಂಶೋಧನೆ.ಆದರೆ ಅದು ನಂಬಿಕೆಗೆ ಮನುಷ್ಯನು ಅರ್ಹನೋ ಆಲ್ಲೊವೋ ಎಂಬುದನ್ನು ಮತ್ತು ಮನುಷ್ಯನ ಸ್ವಭಾವವನ್ನು ಪರೀಕ್ಷೆ ಮಾಡುತ್ತದೆ.

👉🏾7.ಈ ಜಗತ್ತಿನ ತುಂಬೆಲ್ಲಾ ಆಧಿಕವಾಗಿ ರಾಕ್ಷಸರೇ ಇರುವುದು ಆದರೆ ಸ್ನೇಹಿತರಂತೆ ಮುಖವಾಡವನ್ನು ಹಾಕಿಕೊಂಡಿದ್ದಾರೆ ಅಷ್ಟೇ.

👉🏾8.ನಿಮ್ಮ ಮಕ್ಕಳನ್ನು ಶ್ರೀಮಂತರನ್ನಾಗಿ ಮಾಡಿಸಲು ಶಿಕ್ಷಣ ಕೊಡಿಸಬೇಡಿ ಅದರ ಬದಲು ಜೀವನದಲ್ಲಿ ಹೇಗೆ ಖುಷಿಯಾಗಿರುವುದು ಎಂದು ಹೇಳಿಕೊಡಿ.ಆಗ ಅವರು ಬೆಳೆದು ದೊಡ್ಡವರಾದಾಗ ವಸ್ತುಗಳ ಮಹತ್ವ ತಿಳಿಯುತ್ತಾರೆ ಬರೀ ಅದರ ಬೆಲೆಯನಲ್ಲ.

👉🏾9.ನೀವು ಎಷ್ಟು ಕಡಿಮೆ ಕೆಟ್ಟ ವ್ಯಕ್ತಿಗಳಿಗೆ ಸ್ಪಂದಿಸದೇ ಇರುತ್ತೀರೋ ಜೀವನದಲ್ಲಿ ಅಷ್ಟು ನೆಮ್ಮದಿಯಿಂದ ಇರುತ್ತೀರಿ.

👉🏾10.ಬಲಹೀನ ವ್ಯಕ್ತಿಗಳು ಪ್ರತೀಕಾರವನ್ನು ತೆಗೆದುಕೊಳ್ಳುತ್ತಾರೆ. ಬಲವಾದ ವ್ಯಕ್ತಿಗಳು ಕ್ಷಮಿಸಿಬಿಡುತ್ತಾರೆ,ಬುದ್ದಿವಂತ ವ್ಯಕ್ತಿಗಳು ನಿರ್ಲಕ್ಷಿಸುತ್ತಾರೆ.

👉🏾11.ನೀವು ಸಂತೋಷದಿಂದ ಇರಬೇಕಾದರೆ ಹಿಂದೆ ನಿಮ್ಮ ಜೀವನದಲ್ಲಿ ಆದ ಘಟನೆಗಳನ್ನು ನೆನೆಸಿಕೊಂಡು ಕೊರಗಬೇಡಿ.ಮುಂದಿನ ಜೀವನದ ಬಗ್ಗೆ ಯೋಚನೆ ಮಾಡಿ ತಲೆ ಕೆಡಿಸಿಕೊಳ್ಳಬೇಡಿ. ಈಗಿರುವ ಜೀವನದ ಬಗ್ಗೆ ಸಂಪೂರ್ಣವಾಗಿ ಹೇಗಿರಬೇಕೆಂದು ಯೋಚಿಸಿ.

👉🏾12.ನೀವು ನಿಮ್ಮ ಜೀವನದಲ್ಲಿ ಗಳಿಸುವ ಸಂತೋಷಕ್ಕೆ ನೀವೇ ಕಾರಣ ಕರ್ತರಾಗಬೇಕು.ಬೇರೆಯವರು ನಿಮ್ಮನ್ನು ಸಂತೋಷ ಪಡಿಸುತ್ತಾರೆ ಎಂದು ಅಂದುಕೊಂಡರೆ.ಅದು ಯಾವಾಗಲೂ ಕೊನೆಗೆ ನಿರಾಸೆಯಿಂದಲೇ ಕೊನೆಗೊಳ್ಳುತ್ತದೆ.

👉🏾13.ನಾನು ಸತ್ಯವನ್ನು ಹೇಳುವವರನ್ನು ಗೌರವಿಸುತ್ತೇನೆ.ಸತ್ಯವೂ ಎಷ್ಟೇ ಕಠಿಣವಾಗಿದ್ದರೂ ಸರಿಯೇ.

👉🏾14.ನೀವು ಜೀವನದಲ್ಲಿ ಗಿಣಿಯ ತರ ಇರಬೇಡಿ ಬದಲಿಗೆ ಹದ್ದುಗಳಾಗಿ ಇರಿ.ಗಿಣಿಯೂ ಅಧಿಕವಾಗಿ ಮಾತನಾಡುತ್ತದೆ. ಆದರೆಹದ್ದು ಶಾಂತವಾಗಿ ಇದ್ದು, ಅದಕ್ಕೆ ಆಕಾಶವನ್ನು ಮುಟ್ಟುವಂತಹಯೋಚನಾ ಶಕ್ತಿ ಇದೆ.

👉🏾15.ಜೀವನದಲ್ಲಿ ಬದಲಾವಣೆಯನ್ನು ಕಾಲಕ್ಕೆ ತಕ್ಕಂತೆ ಮಾಡಿಕೊಳ್ಳಿ,ಎದರಿಕೊಳ್ಳಬೇಡಿ,ನೀವು ಯಾವುದೋ ಒಂದು ಒಳ್ಳೆಯದನ್ನು ಕಳೆದುಕೊಳ್ಳುತ್ತೀರ ಆದರೆ ಏನೋ ಒಂದು ಉತ್ತಮವಾದುದನ್ನು ಪಡೆದುಕೊಳ್ಳುತ್ತೀರ.

👉🏾16.ನಮ್ಮ ತೊಂದರೆಗಳ ಬಗ್ಗೆ ಮಾತನಾಡುವುದೇ ನಮ್ಮ ಅತೀ ದೊಡ್ಡ ತಪ್ಪು,ಹುಚ್ಚು ಚಟವಾಗಿದ್ದು ,ಅಂತಹ ಅಭ್ಯಾಸವನ್ನು ಬಿಟ್ಟುಬಿಡಿ,ನಿಮ್ಮ ಸಂತೋಷ ಮತ್ತು ಖುಷಿಯ ಬಗ್ಗೆ ಮಾತನಾಡಿ.

👉🏾17.ಯಾರ ಜೊತೆಗೂ ಯಾವತ್ತೂ ಕೂಡ ಅತಿಯಾದ ಬಾಂಧವ್ಯವನ್ನು ಇಟ್ಟುಕೊಳ್ಳಬೇಡಿ,ಯಾಕೆಂದರೆ ಆ ಅತಿಯಾದ ಬಾಂಧವ್ಯ ಅತಿಯಾದ ನಿರೀಕ್ಷೆಗಳನ್ನು ತಂದೊಡ್ಡಿ ಆ ನೀರಿಕ್ಷೆಗಳು ಸುಳ್ಳಾದಾಗ ನೋವಿನಿಂದ ಬಳಲುವಂತೆ ಮಾಡುತ್ತದೆ.

👉🏾18.ಅತಿಯಾದ ಯೋಚನೆಯೇ ನಮ್ಮ ಜೀವನದ ಸಂತೋಷವನ್ನು ಹಾಳುಮಾಡಿದುಃಖಪಡಲು ಅತೀ ದೊಡ್ಡ ಕಾರಣವಾಗುತ್ತದೆ.

🍁🍁🍁🍁🍁🍁🍁🍁🍁🍁🍁

No comments:

Post a Comment